For the best experience, open
https://m.justkannada.in
on your mobile browser.

 ನಟ ದರ್ಶನ್ ಗೆ ಜೈಲೂಟವೇ ಗತಿ: ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

03:50 PM Jul 25, 2024 IST | prashanth
 ನಟ ದರ್ಶನ್ ಗೆ ಜೈಲೂಟವೇ ಗತಿ  ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು,ಜುಲೈ, 25,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

ಜೈಲಿನ ಊಟ ಬೇಡ, ಮನೆಯಿಂದ ಊಟ, ಹಾಸಿಗೆ ಪುಸ್ತಕ ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.  ವಿಚಾರಣೆ ನಡೆಸಿದ್ದ ಹೈಕೋರ್ಟ್  ಈ ಸಂಬಂಧ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ 24ನೇ ಎಸಿಎಂಎಂ ಕೋರ್ಟ್  ಮನೆಯೂಟಕ್ಕೆ ನಿರಾಕರಿಸ ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್ ಆದಂತೆ ಆಗಿದೆ. ಈ ಸಂಬಂಧ ಜುಲೈ 29 ರಂದು ಹೈಕೋರ್ಟ್ ನಲ್ಲಿ ವಿಚಾರಣೆ ಇದ್ದು ಅಲ್ಲಿಯೂ ಸಹ ಮನೆಯೂಟಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.

Key words: actor Darshan, Home meal, Application, dismissed

Tags :

.