For the best experience, open
https://m.justkannada.in
on your mobile browser.

ನಟ ದರ್ಶನ್ ನ್ಯಾಯಾಂಗ ಬಂಧನ ಅವಧಿ ಆ.28ರವರೆಗೆ ವಿಸ್ತರಣೆ

03:39 PM Aug 14, 2024 IST | prashanth
ನಟ ದರ್ಶನ್ ನ್ಯಾಯಾಂಗ ಬಂಧನ ಅವಧಿ ಆ 28ರವರೆಗೆ ವಿಸ್ತರಣೆ

ಬೆಂಗಳೂರು, ಆಗಸ್ಟ್ 14,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ , ನಟ ದರ್ಶನ್‌ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರ ತನಕ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.

ಇಂದು ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ 24ನೇ ಎಸಿಎಂಎಂ  ಕೋರ್ಟ್‌ಗೆ  ನಟ ದರ್ಶನ್ , ಇತರೆ ಆರೋಪಿಗಳು ಹಾಗೂ ತುಮಕೂರು ಜೈಲಿನಿಂದ ನಾಲ್ವರು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು.

ಇದೀಗ ನಟ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿಯನ್ನ ಆಗಸ್ಟ್ 28ರವರೆಗೆ ವಿಸ್ತರಿಸಿ ನ್ಯಾಯಮೂರ್ತಿ ವಿಶ್ವನಾಥ್ ಸಿ ಗೌಡರ್ ಆದೇಶಿಸಿದ್ದಾರೆ.

Key words: Actor Darshan,  judicial custody, extended, August 28

Tags :

.