HomeBreaking NewsLatest NewsPoliticsSportsCrimeCinema

ಅರವಿಂದ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

01:07 PM Jul 05, 2024 IST | prashanth

ನವದೆಹಲಿ,ಜುಲೈ,5,2024 (www.justkannada.in):  ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನ ದೆಹಲಿ ಹೈಕೋರ್ಟ್ ಜುಲೈ 17ಕ್ಕೆ ಮುಂದೂಡಿಕೆ ಮಾಡಿದೆ.

ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ನ್ಯಾಯಾಲಯವು ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿದೆ.  ಹಾಗೆಯೇ ಸಿಬಿಐಗೆ ನೋಟಿಸ್ ನೀಡಿದೆ.

ಕೇಜ್ರಿವಾಲ್ ಮೊದಲು ನಗರ ನ್ಯಾಯಾಲಯವನ್ನು ಸಂಪರ್ಕಿಸಬೇಕಾಗಿತ್ತು ಎಂಬ ಸಿಬಿಐ ವಾದವನ್ನು ಹೈಕೋರ್ಟ್ ಒಪ್ಪಿಕೊಂಡಿತು. ಆದರೆ ನ್ಯಾಯಪೀಠವು ನಂತರ ವಾದಗಳ ಸಮಯದಲ್ಲಿ ಹೈಕೋರ್ಟ್ ಗೆ ಕೇಜ್ರಿವಾಲ್ ಅವರ ನೇರ ಮೇಲ್ಮನವಿಯ ಅರ್ಹತೆಯನ್ನು ಪರಿಗಣಿಸಲು ಆಯ್ಕೆ ಮಾಡಿತು.

Key words: Arvind Kejriwal, bail, hearing, adjourned

Tags :
adjournedArvind Kejriwalbailhearing
Next Article