HomeBreaking NewsLatest NewsPoliticsSportsCrimeCinema

ಸಿಎಂ ಆರ್ಥಿಕ ಸಲಹೆಗಾರರಾಗಿ ಬಸವರಾಜ ರಾಯರೆಡ್ಡಿ ನೇಮಕ: ಮೂವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ.

06:22 PM Dec 29, 2023 IST | prashanth

ಬೆಂಗಳೂರು,ಡಿಸೆಂಬರ್,29,2023(www.justkannada.in):  ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದ ಮೂವರು ಶಾಸಕರಿಗೆ ಇದೀಗ ಸಿಎಂ ಸಿದ್ದರಾಮಯ್ಯ ಸ್ಥಾನಮಾನ ನೀಡಿ ಅಸಮಾಧಾನವನ್ನ ತಣಿಸಿದ್ದಾರೆ.

ಹೌದು ಸಿಎಂ ಆರ್ಥಿಕ ಸಲಹೆಗಾರರಾಗಿ ಬಸವರಾಜರಾಯರೆಡ್ಡಿ ಅವರನ್ನ ನೇಮಿಸಲಾಗಿದೆ. ಬಸವರಾಜ ರಾಯರೆಡ್ಡಿ ಅವರು ಕೊಪ್ಪಳ ಜಿಲ್ಲೆಯ ಯಲಬುರ್ಗ ಕ್ಷೇತ್ರದ ಶಾಸಕರಾಗಿದ್ದಾರೆ.

ಹಾಗೆಯೇ  ಶಾಸಕ ಬಿಆರ್ ಪಾಟೀಲ್ ಅವರನ್ನ ಸಿಎಂ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಬಿ.ಆರ್ ಪಾಟೀಲ್ ಕಲ್ಬುರ್ಗಿ ಜಿಲ್ಲೆಯ ಅಳಂದ ಶಾಸಕರಾಗಿದ್ದಾರೆ. ಇನ್ನು  ಆರ್.ವಿ ದೇಶಪಾಂಡೆ ಅವರನ್ನ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಇನ್ನು ಮೂವರಿಗೂ ಸಚಿವ ಸಂಪುಟ ದರ್ಜೆಯ ಸಚಿವ ಸ್ಥಾನಮಾನವನ್ನ ನೀಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ.

Key words: Basavaraja Rayareddy -Appointed - Economic Adviser –CM

Tags :
appointedBasavaraja RayareddyCMEconomic Adviser
Next Article