For the best experience, open
https://m.justkannada.in
on your mobile browser.

ಬಿಜೆಪಿಯವರ ಹಣೆಬರಹದಲ್ಲಿ ಗ್ಯಾರಂಟಿ ತೆಗೆಯಲು ಸಾಧ್ಯವಿಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್.

01:08 PM Apr 17, 2024 IST | prashanth
ಬಿಜೆಪಿಯವರ ಹಣೆಬರಹದಲ್ಲಿ ಗ್ಯಾರಂಟಿ ತೆಗೆಯಲು ಸಾಧ್ಯವಿಲ್ಲ  ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಏಪ್ರಿಲ್ 17,2024 (www.justkannada.in): ಗ್ಯಾರಂಟಿಗಳು ರಾಜ್ಯದಲ್ಲಿ ಮುಂದುವರೆಯಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ  ಗ್ಯಾರಂಟಿ ತೆಗೆಯಲು ಬಿಜೆಪಿ ಹಣೆಬರಹದಲ್ಲೇ ಸಾಧ್ಯವಿಲ್ಲ ಎಂದು  ಡಿಸಿಎಂ ಡಿ.ಕೆ ಶಿವಕುಮಾರ್ ನುಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಷೇಧಿಸಲು ಬಿಜೆಪಿಯಿಂದ ಸಾಧ್ಯವಾಗದು. ಬಿಜೆಪಿಯ ಹಣೆಬರಹದಲ್ಲೇ ಅದು ಬರೆದಿಲ್ಲ ಎಂದರು.

ಸೋಲಿನ ಭಯದಿಂದಲೇ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ನಮ್ಮ ಕಾರ್ಯಕ್ರಮ ಬಿಜೆಪಿಯನ್ನು ತೊಳೆಯುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಗ್ಯಾರಂಟಿಯ ಪರ ದೊಡ್ಡ ಅಲೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: BJP, guarantee,  DCM, DK Shivakumar

Tags :

.