For the best experience, open
https://m.justkannada.in
on your mobile browser.

ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುವಂತೆ ಮಾಡಿದ್ದು ಕಾಂಗ್ರೆಸ್- ತೆಲಂಗಾಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಭಾಷಣ

10:16 AM Nov 17, 2023 IST | prashanth
ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುವಂತೆ ಮಾಡಿದ್ದು ಕಾಂಗ್ರೆಸ್  ತೆಲಂಗಾಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಭಾಷಣ

ಹೈದರಾಬಾದ್,ನವೆಂಬರ್ 17,2023(www.justkannada.in): ಬಿಜೆಪಿಯವರು ಮುಸ್ಲೀಂರನ್ನ ದ್ವೇಷಿಸುತ್ತಿದ್ದರು. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುವಂತಾಗಿದೆ. ಹೀಗೆ ಮಾಡಿದ್ದು ಕಾಂಗ್ರೆಸ್ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ತೆಲಂಗಾಣದಲ್ಲಿ ಅಬ್ಬರದ ಭಾಷಣ ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್,  ಕರ್ನಾಟಕದಲ್ಲಿ ಕಾಂಗ್ರೆಸ್​ನಿಂದ 9 ಮುಸ್ಲಿಮರು ಗೆದ್ದಿದ್ದಾರೆ. 9 ಮುಸ್ಲಿಂ ಶಾಸಕರ ಪೈಕಿ 5 ಶಾಸಕರಿಗೆ ಅಧಿಕಾರ ನೀಡಿದೆ. ನನ್ನನ್ನು ಸಚಿವನಾಗಿ ಮಾಡಿದೆ. ಅಲ್ಲದೇ ರಹೀಂ ಖಾನ್​​ ಸಹ ಮಂತ್ರಿ ಆಗಿದ್ದಾರೆ. ಸಲೀಂ ಅಹಮದ್​​​ ಅವರನ್ನು​​​ ಮುಖ್ಯ ಸಚೇತಕರಾಗಿ ಮಾಡಲಾಗಿದೆ. ನಜೀರ್ ಅಹಮದ್​​​​​​​​​ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ.

ಇನ್ನು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಯಾವ ಮುಸ್ಲಿಂ ಸ್ಪೀಕರ್ ಆಗಿರಲಿಲ್ಲ. ಯು.ಟಿ.ಖಾದರ್​ ಅವರನ್ನು ವಿಧಾನಸಭಾ ಸ್ಪೀಕರ್​​ ಆಗಿ ನೇಮಿಸಲಾಗಿದೆ. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ. ಹೀಗೆ ಮಾಡಿದ್ದು ಕಾಂಗ್ರೆಸ್ ಎಂದು ಜಮೀರ್ ಹೇಳಿದ್ದಾರೆ.

Key words: BJP MLAs- Speaker Saab- Minister –Jameer ahamad khan

Tags :

.