HomeBreaking NewsLatest NewsPoliticsSportsCrimeCinema

ಹೆಚ್.ಡಿಕೆ ಬಂಧಿಸಲು ಒಬ್ಬ ಪೊಲೀಸ್ ಕಾನ್ಸ್ ಟೇಬಲ್ ಸಾಕು- ಸಿಎಂ ಸಿದ್ದರಾಮಯ್ಯ ತಿರುಗೇಟು

06:29 PM Aug 21, 2024 IST | prashanth

ವಿಜಯಪುರ,ಆಗಸ್ಟ್, 21,2024 (www.justkannada.in):  ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬಂದರೂ ಸಾಧ್ಯವಿಲ್ಲ ಎಂದು ಹೇಳಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ವಿಜಯಪುರ ಜಿಲ್ಲೆ ನಿಡಗುಂದಿಯ ಅಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ಧರಾಮಯ್ಯ,  ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬೇಡ, ಕೇವಲ ಒಬ್ಬ  ಪೊಲೀಸ್ ಕಾನ್ಸ್ ಟೇಬಲ್ ಸಾಕು ಎಂದು ಟಾಂಗ್ ನೀಡಿದರು.

ಅರೆಸ್ಟ್‌ ಮಾಡುವುದು ಯಾರು, ನಾನು ಮಾಡ್ತೀನಾ? ಪೊಲೀಸರು ಮಾಡುತ್ತಾರೆ. ನನಗೆ ಹೆದರಿಕೊಳ್ಳದೆ ಹೋಗಿದ್ದರೆ ಕುಮಾರಸ್ವಾಮಿ ಪ್ರೆಸ್‌ಮೀಟ್‌ ಮಾಡುತ್ತಿದ್ದರಾ?  ಕುಮಾರಸ್ವಾಮಿ ಅವರ ವಿರುದ್ಧ ರಾಜ್ಯಪಾಲರ ಬಳಿ ಈ ಹಿಂದೆಯೇ ದೂರು ದಾಖಲಾಗಿದ್ದು, ಅದರ ತನಿಖೆ ಆರಂಭಗೊಳ್ಳಲಿದೆ ಎಂದು ಹೆದರಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಚಾಟಿ ಬೀಸಿದರು.

ಕುಮಾರಸ್ವಾಮಿಯದ್ದು ಕೇವಲ ಬರೀ ಹಿಟ್ ಆ್ಯಂಡ್ ರನ್ ಮಾತ್ರ. ಯಾವ ಪ್ರಕರಣವನ್ನ ಹೆಚ್.ಡಿಕೆ ಲಾಜಿಕಲ್ ಎಂಡ್ ಗೆ ತೆಗೆದುಕೊಂಡು ಹೋಗಿಲ್ಲ.  ಪೆನ್ ಡ್ರೈವ್ ಪೆನ್ ಡ್ರೈವ್ ಅಂದರು. ಪೆನ್ ಡ್ರೈವ್ ಏನಾಯಿತು..? ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಮುಡಾ ಹಗರಣ ಸಂಬಂಧ ದಾಖಲೆ ತಿದ್ದಿದ್ದಾರೆಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಯಾವ ದಾಖಲೆಯನ್ನೂ ತಿದ್ದಿಲ್ಲ ಎಂದರು.

Key words:  constable, arrest, HDK, CM Siddaramaiah

Tags :
arrestCM SiddaramaiahConstable.HDK
Next Article