For the best experience, open
https://m.justkannada.in
on your mobile browser.

ನಟ ದರ್ಶನ್ ಗೆ ರಾಜಾತಿಥ್ಯ: ಸಂಪೂರ್ಣ ವರದಿ ನೀಡುವಂತೆ ಡಿಜಿ&ಐಜಿಪಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

12:37 PM Aug 26, 2024 IST | prashanth
ನಟ ದರ್ಶನ್ ಗೆ ರಾಜಾತಿಥ್ಯ  ಸಂಪೂರ್ಣ ವರದಿ ನೀಡುವಂತೆ ಡಿಜಿ ಐಜಿಪಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಆಗಸ್ಟ್,26,2024 (www.justkannada.in):  ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರವನ್ನ ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ ಇದೀಗ ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಗೆ ಸೂಚನೆ ನೀಡಿದರು.

ಈ ಸಂಬಂಧ ಇಂದು ಸಿಎಂ ನಿವಾಸ ಕಾವೇರಿಗೆ ಭೇಟಿ ನೀಡಿದ ಡಿಜಿ&ಐಜಿಪಿ ಅಲೋಕ್ ಮೋಹನ್,  ನಟ ದರ್ಶನ್ ಗೆ ರಾಜಾತಿಥ್ಯ ವಿಚಾರದಲ್ಲಿ 7 ಜೈಲು ಸಿಬ್ಬಂದಿ ಸಸ್ಪೆಂಡ್ ಕುರಿತು ಮಾಹಿತಿಯನ್ನ ಸಿಎಂ ಸಿದ್ದರಾಮಯ್ಯಗೆ ನೀಡಿದರು.

ಈ ವೇಳೆ ಕಾರಾಗೃಹಕ್ಕೆ ಭೇಟಿ ನೀಡಿ ಸಂಪೂರ್ಣ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಅಲ್ಲದೆ ನಿಯಮ ಉಲ್ಲಂಘಿಸಿದ ಜೈಲು ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುವಂತೆ ಡಿಜಿ&ಐಜಿಪಿ ಅಲೋಕ್ ಮೋಹನ್ ಗೆ ಸೂಚಿಸಿದರು.

Key words:  Darshan, royal hospitality, CM Siddaramaiah, DG&IGP, report

Tags :

.