HomeBreaking NewsLatest NewsPoliticsSportsCrimeCinema

ಕೇಂದ್ರದಿಂದ ಬರ ಪರಿಹಾರ: ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ-ಡಿಸಿಎಂ ಡಿ.ಕೆ ಶಿವಕುಮಾರ್

03:51 PM Apr 27, 2024 IST | prashanth

ಬೆಂಗಳೂರು,ಏಪ್ರಿಲ್,27,2024 (www.justkannada.in): ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಟ್ಟಿರುವ ಬರಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಟೀಕಿಸಿದರು.

ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಮ್ಮ ಪಾಲಿನ ಹಣ ಸರಿಯಾಗಿ ನೀಡಿಲ್ಲ. ಕೊಡಬೇಕಾದ ಪಾಲು ಸರಿಯಾಗಿ ಕೊಟ್ಟಿಲ್ಲ. ಕನಿಷ್ಠ 15 ಸಾವಿರ ಕೋಟಿ ರೂ. ನಾದ್ರೂ ಕೊಡಬೇಕಿತ್ತು. ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ  ರೀತಿ ಪರಿಹಾರ ಕೊಟ್ಟಿದ್ದಾರೆ. ಬರ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ ಎಂದರು.

ಕೇಂದ್ರ ಸರ್ಕಾರದ ವಿರುದ್ದ ನಮ್ಮ ಹೋರಾಟ ಮುಂದುರೆಸುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

Key words: Drought relief - Centre-DCM -DK Shivakumar

Tags :
Drought relief - Centre-DCM -DK Shivakumar
Next Article