For the best experience, open
https://m.justkannada.in
on your mobile browser.

ಇಡಿ ವಿರುದ್ಧ ಕಂಪ್ಲೇಂಟ್ ಕೊಡಿಸಿ 'ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯರಿಂದ ಇನ್ನಿಲ್ಲದ ದುಸ್ಸಾಹಸ- ಬಿಜೆಪಿ ಕಿಡಿ

01:07 PM Jul 24, 2024 IST | prashanth
ಇಡಿ ವಿರುದ್ಧ ಕಂಪ್ಲೇಂಟ್ ಕೊಡಿಸಿ  ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯರಿಂದ ಇನ್ನಿಲ್ಲದ ದುಸ್ಸಾಹಸ  ಬಿಜೆಪಿ ಕಿಡಿ

ಬೆಂಗಳೂರು,ಜುಲೈ,24,2024 (www.justkannada.in): ಇಡಿ ವಿರುದ್ಧ ಕಂಪ್ಲೇಂಟ್ ಕೊಡಿಸಿ 'ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಇನ್ನಿಲ್ಲದ ದುಸ್ಸಾಹಸ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ ಕಿಡಿ ಕಾರಿದೆ.

ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, 'ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯನವರಿಂದ ಇನ್ನಿಲ್ಲದ ದುಸ್ಸಾಹಸ. ಇಂದು ಇಡಿ ವಿರುದ್ಧ ಕಂಪ್ಲೇಂಟ್ ಮಾಡಿರುವ ಕಲ್ಲೇಶ್ ಬಿ ಎಂಬ ಅಧಿಕಾರಿಯನ್ನು ಕಳೆದ ತಿಂಗಳು ಭ್ರಷ್ಟಾಚಾರದ ಆರೋಪದಡಿ ರಾಜ್ಯ ಸರ್ಕಾರ ಅಮಾನತ್ತಿನಲ್ಲಿಟ್ಟಿತ್ತು. ಇಡಿ ತನಿಖೆಯಲ್ಲಿ ಸಿಎಂ ಹಾಗೂ ಡಿಸಿಎಂಗಳ ಕೈವಾಡದ ಬಗ್ಗೆ ಈ ಅಧಿಕಾರಿ ಮಾಹಿತಿ ನೀಡಿದ್ದಾನೆ ಎಂಬ ವಿಷಯ ತಿಳಿದ ತಕ್ಷಣ ಕಾಂಗ್ರೆಸ್ ನಾಟಕ ಒಂದನ್ನು ಆರಂಭಿಸಿದೆ' ಎಂದು ವಾಗ್ದಾಳಿ  ನಡೆಸಿದೆ.

'ಕಳಂಕಿತ ಅಧಿಕಾರಿಯಾದ ಕಲ್ಲೇಶ್ ಗೆ ಆಮಿಷ ಒಡ್ಡಿ, ಅಧಿಕಾರ ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಸರ್ಕಾರವು ಇಡಿ ತನಿಖಾಧಿಕಾರಿಗಳ ವಿರುದ್ಧ ಸಿಎಂ ಡಿಸಿಎಂ ಹೆಸರನ್ನು ಹೇಳಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಸುಳ್ಳು ಕಂಪ್ಲೇಂಟ್ ಮಾಡಿಸಿದೆ. ಸಿದ್ದರಾಮಯ್ಯನವರು ಕುರ್ಚಿಗೆ ಅಂಟಿಕೊಳ್ಳದೆ, ವಾಲ್ಮೀಕಿ ಹಾಗೂ ಮೂಡಾ ಹಗರಣದ ನೈತಿಕ ಹೊಣೆಯನ್ನು ಹೊತ್ತು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಿಬಿಐ ತನಿಖೆಗೆ ಸಹಕರಿಸಬೇಕೆಂದು ಆಗ್ರಹಿಸುತ್ತೇವೆ' ಎಂದು ಬಿಜೆಪಿ ಒತ್ತಾಯಿಸಿದೆ.

Key words: Filed, complaint, against, ED 'Siddaramaiah, BJP

Tags :

.