HomeBreaking NewsLatest NewsPoliticsSportsCrimeCinema

ಎಂ​.ಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ

03:35 PM Sep 19, 2024 IST | prashanth

ಬೆಂಗಳೂರು, ಸೆಪ್ಟಂಬರ್,19,2024 (www.justkannada.in):  ನಗರದ  ಎಂ​.ಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಕೆಲ ನರ್ಸ್ ಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಆಸ್ಪತ್ರೆಯ ಕಾರ್ಡಿಯಾಕ್ ಐಸಿಯು ವಾರ್ಡ್​ನ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದುರಂತದಲ್ಲಿ ನರ್ಸ್​ಗಳ​​ ಸಮಯಪ್ರಜ್ಞೆಯಿಂದ 8 ರೋಗಿಗಳು ಪಾರಾಗಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಅಗ್ನಿ ಅವಘಡ ಕುರಿತು ಪ್ರತಿಕ್ರಿಯಿಸಿದ ಎಂ.ಎಸ್.ರಾಮಯ್ಯ ಆಸ್ಪತ್ರೆ ಸಿಇಓ ಶ್ರೀನಿವಾಸ್ ಮೂರ್ತಿ, 'ಇಂದು ಮಧ್ಯಾಹ್ನ ಕಾರ್ಡಿಕ್ ಯುನಿಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,  ತಕ್ಷಣ ಎಲ್ಲಾ ಸಿಬ್ಬಂದಿ ರೋಗಿಗಳನ್ನ ಶಿಫ್ಟ್ ಮಾಡಿಲಾಗಿದೆ. ಆಸ್ಪತ್ರೆಯಲ್ಲಿ ಇದ್ದ ಅಗ್ನಿಶಾಮಕ ಪರಿಕರಗಳಿಂದ‌ ಬೆಂಕಿ ನಂದಿಸುವ ಪ್ರಯತ್ನ ಆಗಿದೆ. ಹೀಗಾಗಿ ಆಸ್ಪತ್ರೆಯ ಅರ್ಧದಷ್ಟು ಭಾಗದಲ್ಲಿ ವಿದ್ಯುತ್ ಸಂಪರ್ಕ ನಿಲ್ಲಿಸಿ, ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ. ಸರ್ಕ್ಯೂಟ್​ನಿಂದ ಘಟನೆ ನಡೆದಿದೆ ಎನ್ನಿಸುತ್ತಿದೆ ಎಂದಿದ್ದಾರೆ.

Key words: fire accident, MS Ramaiah Hospital, Bangalore

Tags :
Bangalorefire accidentMS Ramaiah Hospital
Next Article