For the best experience, open
https://m.justkannada.in
on your mobile browser.

ಕಾಂಗ್ರೆಸ್ ಪುಡಾರಿಗಳಿಂದ ಗಲಾಟೆ: ನಾನು ಈ ಕ್ಷಣಕ್ಕೂ ಮಹಿಷ ದಸರಾ ವಿರೋಧಿ- ಸಂಸದ ಪ್ರತಾಪ್ ಸಿಂಹ ಕಿಡಿ.

05:11 PM Jan 22, 2024 IST | prashanth
ಕಾಂಗ್ರೆಸ್ ಪುಡಾರಿಗಳಿಂದ ಗಲಾಟೆ  ನಾನು ಈ ಕ್ಷಣಕ್ಕೂ ಮಹಿಷ ದಸರಾ ವಿರೋಧಿ  ಸಂಸದ ಪ್ರತಾಪ್ ಸಿಂಹ ಕಿಡಿ

ಮೈಸೂರು,ಜನವರಿ,22,2024(www.justkannada.in): ರಾಮಲಲ್ಲಾ ಮೂರ್ತಿಗೆ ಶಿಲೆ ಸಿಕ್ಕ ಸ್ಥಳದಲ್ಲಿ ನಡೆಯುತ್ತಿದ್ದ ಭೂಮಿ ಪೂಜಾ ಕಾರ್ಯಕ್ಕೆ ಆಗಮಿಸಿದ್ದ ವೇಳೆ  ತಮಗೆ ಪೂಜಾ ಸ್ಥಳಕ್ಕೆ ಹೋಗದಂತೆ ಘೇರಾವ್ ಹಾಕಿ ಗಲಾಟೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ನಾನು ಈ ಕ್ಷಣಕ್ಕೂ ಮಹಿಷ ದಸರಾ ವಿರೋಧಿ. ಮಹಿಷಾ ದಸರಾ ವಿರೋಧ ಮಾಡಿದ್ದಕ್ಕೆ ಯಾರೋ ನಾಲ್ಕು ಜನ ಕಿಡಿಗೇಡಿಗಳು ಗಲಾಟೆ ಮಾಡಿದರು. ಕಾಂಗ್ರೆಸ್ ನ ಪುಡಾರಿಗಳಿಂದ ಗಲಾಟೆ ನಡೆದಿದೆ. ಮತ್ತೆ ಯಾರೋ ನಾಲ್ಕು ಜನ ಮಹಿಷನ ಭಕ್ತರಿದ್ದಾರೆ ಅಷ್ಟೆ. ಆದರೆ ಚಾಮುಂಡಿ ತಾಯಿಯ ಭಕ್ತರು ಕೋಟ್ಯಾಂತರ ಜನ ಇದ್ದಾರೆ. ನಾನು ಚಾಮುಂಡಿಯ ಭಕ್ತ‌ ಎಂದರು.

ನನ್ನನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್ ನವರಿಂದ ಸೋಲಿಸಲು ಸಾಧ್ಯವಿಲ್ಲ. ಈ ಕಾರಣಕ್ಕೆ ಇಂತಹ ಗಲಾಟೆಗಳು ಮುಂದೆನೋ ನಡೆಯುತ್ತೆ. ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಸಂಸದ ಪ್ರತಾಪ ಸಿಂಹ ಟಾಂಗ್ ನೀಡಿದರು.

Key words: I am anti-Mahisha Dussehra- mysore-MP Pratap Simha

Tags :

.