For the best experience, open
https://m.justkannada.in
on your mobile browser.

ಸಹಕಾರ ಬ್ಯಾಂಕ್ ಅವ್ಯವಹಾರ ಪ್ರಕರಣ: ಸಿಬಿಐ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ.

05:29 PM Dec 02, 2023 IST | prashanth
ಸಹಕಾರ ಬ್ಯಾಂಕ್  ಅವ್ಯವಹಾರ ಪ್ರಕರಣ  ಸಿಬಿಐ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು,ಡಿಸೆಂಬರ್,2,2023(www.justkannada.in):  ಸಹಕಾರ ಬ್ಯಾಂಕ್ ಗಳಲ್ಲಿ ಅಕ್ರಮ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ ಆದೇಶಿಸಿದೆ.

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ , ವಸಿಷ್ಠ ಕೋಆಪರೇಟಿವ್ ಬ್ಯಾಂಕ್, ಗುರುಸಾರ್ವಭೌಮ ಸೌಹಾರ್ಧ ಕೋಅಪರೇಟಿವ್ ಬ್ಯಾಂಕ್  ಅಕ್ರಮ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿದೆ. ಈ ಬ್ಯಾಂಕ್ ಗಳಲ್ಲಿ ಬಹುಕೋಟಿ ಅವ್ಯವಹಾರ ನಡೆದಿತ್ತು ಎನ್ನಲಾಗಿದೆ. ಬ್ಯಾಂಕ್ ಆಡಳಿತ ಮಂಡಳಿ ನಿಯಮಬಾಹಿರವಾಗಿ ಸಾಲವನ್ನ ನೀಡಿದ್ದವು.

ಈ ನಡುವೆ ಹಣ ಸಿಗದೆ ಠೇವಣಿದಾರರು ಹೋರಾಟ ಮಾಡಿದ್ದರು. ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದರು. ಇದೀಗ ರಾಜ್ಯ ಸರ್ಕಾರ ಮೂರು ಬ್ಯಾಂಕ್ ಗಳ ಅವ್ಯವಹಾರ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿದೆ.

Key words: Illegal case - three -co-operative banks- State- govt - CBI - investigate

Tags :

.