HomeBreaking NewsLatest NewsPoliticsSportsCrimeCinema

ಎಲ್ಲಾ ಜಾತಿ-ಧರ್ಮದವರಿಗೂ ಆದ್ಯತೆ ನೀಡಬೇಕು: ಕೋಲಾರ ಅಪರಾಧ ಮುಕ್ತ ಆಗಬೇಕು- ಸಿಎಂ ಸಿದ್ದರಾಮಯ್ಯ ಸೂಚನೆ.

04:19 PM Dec 27, 2023 IST | prashanth

ಕೋಲಾರ,ಡಿಸೆಂಬರ್,27,2023(www.justkannada.in): ಎಲ್ಲಾ ಜಾತಿ-ಧರ್ಮದವರಿಗೂ ಆದ್ಯತೆ ನೀಡಬೇಕು.  ಕೋಲಾರ ಜಿಲ್ಲೆ ಅಪರಾಧ ಮುಕ್ತ ಆಗಬೇಕು ಎಂದು ಅಧಿಕಾರಿಗಳಿಗೆ  ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಕೋಲಾರದಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಬಳಿಕ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.  ದೇವಸ್ಥಾನದ ಮತ್ತು ವಕ಼್ಫ್ ಬೋರ್ಡ್ ಗೆ  ಸಂಬಂಧಪಟ್ಟ ಸ್ಥಳಗಳು, ಜಮೀನು ಆಯಾ ಆಯಾ ಸಂಸ್ಥೆಗೆ ಹೋಗಬೇಕು. ಇವರ ಜಾಗ ಅವರಿಗೆ, ಅವರ ಜಾಗ ಇವರಿಗೆ ಹೋಗದಂತೆ, ತಾಂತ್ರಿಕ ದಾಖಲಾತಿಗಳ ಗೊಂದಲ ಉಂಟಾಗದಂತೆ ಸಮಗ್ರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ವಿಶ್ವಕರ್ಮ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳಲ್ಲೂ ನಿಯಮಾನುಸಾರ ಎಲ್ಲಾ ಜಾತಿ ಧರ್ಮದವರಿಗೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆಯನ್ನು ನೀಡಿದರು.

ಹಾಗೆಯೇ ಕೋಲಾರ ಜಿಲ್ಲೆಯಲ್ಲಿ ಅಪರಾಧಗಳ ಹೆಚ್ಚಳ ಆದರೆ ನಾನು ಸಹಿಸಲ್ಲ. ಕೋಲಾರ ಅಪರಾಧ ಮುಕ್ತ ಆಗಬೇಕು. ಚಾಳಿಬಿದ್ದ ಆರೋಪಿಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ  ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದರು.

Key words: Kolar- should be -crime free- CM –Siddaramaiah- instructs.

Tags :
CMinstructsKolar- should be -crime freeSiddaramaiah
Next Article