For the best experience, open
https://m.justkannada.in
on your mobile browser.

ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು.

04:59 PM May 07, 2024 IST | prashanth
ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಶಿವಮೊಗ್ಗ,ಮೇ,7,2024 (www.justkannada.in): ಮತದಾನ ಮಾಡಲು ತೆರಳುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. 32 ವರ್ಷದ ಮಂಜುನಾಥ್ ಮೃತಪಟ್ಟವರು. ಮಂಜುನಾಥ್ ಚುರ್ಚಿಗುಂಡಿಯಿಂದ ಭ್ರದಾವತಿಗೆ ಮತದಾನ ಮಾಡಲು ತೆರಳುತ್ತಿದ್ದರು.

ಮತದಾನಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರ ಮಂಜುನಾಥ್  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: lokasabha, election, man ,died, accident

Tags :

.