ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಪಂಚಭೂತಗಳಲ್ಲಿ ಲೀನ.
04:26 PM Nov 25, 2023 IST
|
prashanth
Tags :
ಬೆಂಗಳೂರು ,ನವೆಂಬರ್,25,2023(www.justkannada.in): ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ಸೋಮಸುಂದರ ಪಾಳ್ಯ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಕ್ಯಾ.ಪ್ರಾಂಜಲ್ ಅಂತ್ಯಸಂಸ್ಕಾರ ನಡೆಸಿದ್ದು,ಭಾರತಾಂಬೆಯ ಹೆಮ್ಮೆಯ ಪುತ್ರನಿಗೆ ಭಾವುಕ ಅಂತಿಮ ವಿದಾಯ ಹೇಳಲಾಯಿತು.
ಪ್ರಾಂಜಲ್ ಅವರ ಅಂತಿಮ ವಿಧಿವಿಧಾನಗಳನ್ನ ತಂದೆ ನೆರವೇರಿಸಿದರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸಂಬಂಧಿಕರು, ಸೇನಾಧಿಕಾರಿಗಳು ಸೇರಿ ನೆರದಿದ್ದ ಜನರು ವೀರ ಯೋಧನಿಗೆ ಕಂಬನಿ ಮಿಡಿದರು.
Key words: Martyr –warrior- K. Pranjal- funeral-Bangalore
Next Article