HomeBreaking NewsLatest NewsPoliticsSportsCrimeCinema

ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ: ಸರ್ಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?  ಹೆಚ್.ಡಿಕೆ ವಾಗ್ದಾಳಿ.

03:44 PM May 01, 2024 IST | prashanth

ಬೆಂಗಳೂರು,ಮೇ,1,2024 (www.justkannada.in): ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?  ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ? ಎಂದು ಕಿಡಿಕಾರಿದ್ದಾರೆ.

ಕೃಷಿ ಅನುದಾನಕ್ಕೆ 32% ಕತ್ತರಿ ಹಾಕಿದ್ದಾಯಿತು. ಈಗ ಹೈನುಗಾರರ ಸಬ್ಸಿಡಿಗೂ ಪಂಗನಾಮ. ಒಂದು ಲೀಟರ್ ಹಾಲಿನ ಸಬ್ಸಿಡಿಯನ್ನು ₹7 ಹೆಚ್ಚಿಸುತ್ತೇವೆ ಎಂದು ಚುನಾವಣೆ ವೇಳೆ ಕಾಂಗ್ರೆಸ್ ಸುಳ್ಳು ಹೇಳಿದ್ದೇ ಹೇಳಿದ್ದು. ಹೆಚ್ಚಿಸುವ ಮಾತಿರಲಿ, ಇದ್ದ ಸಬ್ಸಿಡಿಯನ್ನೂ (ಲೀಟರ್ ಹಾಲಿಗೆ ₹5) ಕೊಡದೇ 7 ತಿಂಗಳಿಂದ ಸತಾಯಿಸುತ್ತಿದೆ.

ಗೋವಿನ ಆಹಾರವಾದ ಹಿಂಡಿ, ಬೂಸಾ ಬೆಲೆ ಗಗನಕ್ಕೇರಿದೆ. ಮೇವೂ ಸಿಗುತ್ತಿಲ್ಲ. ಇಂಥ ಕಡು ಸಂಕಷ್ಟದಲ್ಲಿರುವ ಹಾಲು ಉತ್ಪಾದಕರಿಗೆ ಕೂಡಲೇ ರಾಜ್ಯ ಸರಕಾರ ಸಬ್ಸಿಡಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Key words:  Milk Producer, Subsidy, Pending, HDK

Tags :
700 Crore -Milk Producer –Subsidy- Pending-HDK
Next Article