For the best experience, open
https://m.justkannada.in
on your mobile browser.

ಕಾಂಗ್ರೆಸ್ ನಿಂದ ಪ್ರಜಾಪ್ರಭುತ್ವ ಕಗ್ಗೋಲೆ: ಸಿಎಂ ಗಮನಕ್ಕೆ ಬಾರದೆ ಹಗರಣ ನಡೆದಿಲ್ಲ- ಆರ್.ಅಶೋಕ್

11:25 AM Jul 03, 2024 IST | prashanth
ಕಾಂಗ್ರೆಸ್ ನಿಂದ ಪ್ರಜಾಪ್ರಭುತ್ವ ಕಗ್ಗೋಲೆ  ಸಿಎಂ ಗಮನಕ್ಕೆ ಬಾರದೆ ಹಗರಣ ನಡೆದಿಲ್ಲ  ಆರ್ ಅಶೋಕ್

ಬೆಂಗಳೂರು,ಜುಲೈ,3,2024 (www.justkannada.in): ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾದಲ್ಲಿ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ನಾಯಕರು ಇಂದು ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇಂದು ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನ ತಡೆದು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್,  ವಾಲ್ಮೀಕಿ ನಿಗಮದ ಹಗರಣಕ್ಕಿಂತಲೂ ಮುಡಾ ಹಗರಣ ಬೃಹತ್ ಹಗರಣವಾಗಿದೆ. ಕಾಂಗ್ರೆಸ್ ನಿಂದ ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದೆ ಎಂದು ಹರಿಹಾಯ್ದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ರಾಜ್ಯ ಸರಕಾರ ಹಗಲು ದರೋಡೆ ಮಾಡುತ್ತಿದೆ.  ಹಗರಣದ ಬಳಿಕ ಅಧಿಕಾರಿಗಳನ್ನ ವರ್ಗಾವಣೆ ಮಾಡಿದ್ದಾರೆ. ಸಿಎಂ ಗಮನಕ್ಕೆ ಬಾರದೆ ಈ ಹಗರಣ ನಡೆದಿಲ್ಲ. ಮೈಸೂರು ಮುಡಾದಿಂದ ಕಡತಗಳನ್ನ ತಂದಿದ್ದಾರೆ ಎಂದು ಕಿಡಿಕಾರಿದರು.

Key words: muda, currption, protest, R. Ashok

Tags :

.