HomeBreaking NewsLatest NewsPoliticsSportsCrimeCinema

ಸಿಎಂ ವಿರುದ್ದ ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

05:30 PM Aug 13, 2024 IST | prashanth

ಬೆಂಗಳೂರು,ಆಗಸ್ಟ್,13,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಲ್ಲಿಕೆಯಾಗಿದ್ದ ಖಾಸಗಿ ದೂರಿನ ಅರ್ಜಿ ವಿಚಾರಣೆಯನ್ನ ಆಗಸ್ಟ್ 20ಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಮುಂದೂಡಿದೆ.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಖಾಸಗಿ ದೂರಿನ ಕುರಿತ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು.

ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪದ ಸಂಬಂಧ ಸ್ನೇಹಮಯಿ ಕೃಷ್ಣ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಆಗಸ್ಟ್.20ರಂದು ಅರ್ಜಿ ವಿಚಾರಣೆ ಸ್ವೀಕರಿಸುವ ಕುರಿತು ಆದೇಶ ಹೊರಡಿಸುವುದಾಗಿ ತಿಳಿಸಿ ವಿಚಾರಣೆಯನ್ನ ಆಗಸ್ಟ್ 20ಕ್ಕೆ ಮುಂದೂಡಿಕೆ ಮಾಡಿದೆ.

Key words: Muda scandal, court, Snehamai Krishna, Adjournment

Tags :
AdjournmentapplicationhearingMuda scandalSnehamai Krishna
Next Article