For the best experience, open
https://m.justkannada.in
on your mobile browser.

ನಾಳಿನ ರಾಜ್ಯ ಬಜೆಟ್ ಬಗ್ಗೆ ಯಾವ ನಿರೀಕ್ಷೆಯೂ ಇಲ್ಲ- ವಿಪಕ್ಷ ನಾಯಕ ಆರ್.ಅಶೋಕ್.

06:08 PM Feb 15, 2024 IST | prashanth
ನಾಳಿನ ರಾಜ್ಯ ಬಜೆಟ್ ಬಗ್ಗೆ ಯಾವ ನಿರೀಕ್ಷೆಯೂ ಇಲ್ಲ  ವಿಪಕ್ಷ ನಾಯಕ ಆರ್ ಅಶೋಕ್

ಬೆಂಗಳೂರು,ಫೆಬ್ರವರಿ,15,2024(www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು ಲೋಕಸಭೆ ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ಜನರ ನಿರೀಕ್ಷೆಗಳು ಹೆಚ್ಚಿವೆ.

ಈ ಕುರಿತು ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್, ನಾಳಿನ ರಾಜ್ಯ ಬಜೆಟ್ ಬಗ್ಗೆ ಯಾವ ನಿರೀಕ್ಷೆಯೂ ಇಲ್ಲ. ಸಿಎಂ ಸಿದ್ದರಾಮಯ್ಯ  ಆ ಇಲಾಖೆಯಿಂದ ಈ ಇಲಾಖೆಗೆ ಹುಡುಕುವ ಕೆಲಸ ಮಾಡುತ್ತಾರೆ. ನೀರಾವರಿ, ಕೃಷಿ,  ಆರೋಗ್ಯಕ್ಕೆ ಬಜೆಟ್ ನಲ್ಲಿ ಆದ್ಯತೆ ನೀಡಬೇಕು.  ಹಿಂದಿನ ಬಜೆಟ್ ನಲ್ಲಿಯೇ ಎಲ್ಲದಕ್ಕೂ ಹಣ ಕಡಿತ ಮಾಡಿದ್ದಾರೆ.  ಹೀಗಾದರೇ ಹೇಗೆ ನಿರೀಕ್ಷೆ ಇಟ್ಟುಕೊಳ್ಳಬೇಕು. ಈ ದರಿದ್ರ ಸರ್ಕಾರದಿಂದ ನಮಗೆ ಏನು ನಿರೀಕ್ಷೆ ಇಲ್ಲ ಎಂದು ಕಿಡಿಕಾರಿದರು.

Key words: no expectation -about –tomorrow- state budget - Opposition leader -R. Ashok.

Tags :

.