HomeBreaking NewsLatest NewsPoliticsSportsCrimeCinema

ರಾಜ್ಯದಲ್ಲಿ ಕೊರೋನಾಗೆ ಓರ್ವ ಬಲಿ- ಸಚಿವ ದಿನೇಶ್ ಗುಂಡೂರಾವ್ ಮಾಹಿತಿ.

12:00 PM Dec 20, 2023 IST | prashanth

ಬೆಂಗಳೂರು,ಡಿಸೆಂಬರ್,20,2023(www.justkannada.in):  ರಾಜ್ಯದಲ್ಲಿ ಕೊರೋನಾಗೆ ಓರ್ವ ವೃದ್ದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡದ ಸಚಿವ ದಿನೇಶ್ ಗುಂಡೂರಾವ್,  ರಾಜ್ಯದಲ್ಲಿ ಕೊರೋನಾ ಸೋಂಕಿಗೆ 64 ವರ್ಷದ ವೃದ್ದ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ ನಿವಾಸಿಯಾಗಿದ್ದು, ಮೃತ ವ್ಯಕ್ತಿಗೆ JN.1 ಇದೆಯಾ ಅಂತಾ ಗೊತ್ತಾಗಿಲ್ಲ. ಕೋವಿಡ್ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ಬಂದಿದೆ ಎಂದರು.

ದೇಶದಲ್ಲಿ 20 JN.1 ಪ್ರಕರಣಗಳು ಪತ್ತೆಯಾಗಿದೆ. ಗೋವಾದಲ್ಲಿ 18 ಮಹಾರಾಷ್ಟ್ರ ಕೇರಳದಲ್ಲಿ ತಲಾ 1ಕೇಸ್ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇರಲ್ಲ. ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸದ್ಯಕ್ಕೆ ಯಾವುದೇ ನಿರ್ಬಂಧವಿಲ್ಲ. ಈಗಾಗಲೇ 700 ಕೋವಿಡ್  ಟೆಸ್ಟಿಂಗ್ ಮಾಡಿದ್ದೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: One victim -corona virus – death-state – Ministe-r Dinesh Gundurao

Tags :
Dinesh GunduraoministerOne victim -corona virus – death-state
Next Article