HomeBreaking NewsLatest NewsPoliticsSportsCrimeCinema

ನಾಡಹಬ್ಬ  “ ಮೈಸೂರು ದಸರಾ-2024” ಪೋಸ್ಟರ್‌ ಬಿಡುಗಡೆ ಮಾಡಿದ ಸಚಿವದ್ವಯರು.

07:24 PM Sep 20, 2024 IST | mahesh

 

ಮೈಸೂರು,ಸೆ. 20,2024: (www.justkannada.in news) ವಿಶ್ವವಿಖ್ಯಾತ  ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅದಕ್ಕೆ ಅರಮನೆ ನಗರಿ ನಮ್ಮ ಮೈಸೂರಿನಲ್ಲಿ ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯಿತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ದಸರಾ ಸಿದ್ಧತೆ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ದಸರಾ ಕಾರ್ಯಕ್ರಮದ ಪೋಸ್ಟರ್‌ ಬಿಡುಗಡೆ ಮಾಡಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿಯಿಂದಾಗಿ ಕಳೆದ ವರ್ಷ ದಸರಾ ಹಬ್ಬವನ್ನು ಸರಳವಾಗಿ, ಸಾಂಪ್ರದಾಯಿಕ  ಆಚರಿಸಲಾಗಿತ್ತು. ಆದರೆ, ಈ ವರ್ಷ ಉತ್ತಮ ಮುಂಗಾರು ಮಳೆ ಆಗಿರುವುದರಿಂದ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದರು.

ಈ ಬಾರಿಯ ನಾಡಹಬ್ಬವನ್ನು ಬಹಳ ಅದ್ಧೂರಿಯಾಗಿ ಆಚರಿಸಬೇಕಾಗಿರುವುದರಿಂದ,  ನೇಮಕ ಗೊಂಡಿರುವ 19 ದಸರಾ ಉಪಸಮಿತಿಗಳು ಎಲ್ಲಾ ರೀತಿಯ ಸಿದ್ಧತೆಯನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು. ಅಲ್ಲದೆ ಈ ಬಾರಿ  ದಸರಾದಲ್ಲಿ ಪ್ರಜಾಪ್ರಭುತ್ವ ಹಾಗೂ  ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳು ಹಾಗೂ ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು  ಜನರಲ್ಲಿ ಜಾಗೃತಿ ಮೂಡಿಸುವ ಸ್ಥಬ್ಧ ಚಿತ್ರಗಳು ಪ್ರದರ್ಶನ ಗೊಳ್ಳಬೇಕು ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ  ಶಿವರಾಜ್ ಎಸ್ ತಂಗಡಗಿ ಅವರು ಮಾತನಾಡಿ, ಕಳೆದ ಬಾರಿ ಆಗಿರುವ ನ್ಯೂನತೆಗಳನ್ನು ಈ ಬಾರಿ ಸರಿಪಡಿಸಿಕೊಂಡು ಯಾವುದೇ ಅಡಚಣೆ ಹಾಗೂ ತೊಂದರೆ ಉಂಟಾಗದಂತೆ ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು.

ಈ ಬಾರಿಯ ವಿಶ್ವ ವಿಖ್ಯಾತ ದಸರಾ ಸ್ಥಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕ ಸಂಭ್ರಮ:೫೦, ಪ್ರಜಾಪ್ರಭುತ್ವ  ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳನ್ನು ರಚಿಸಬೇಕು ಹಾಗೂ ಕಳೆದ ಬಾರಿ ಪ್ರದರ್ಶನ ಗೊಂಡಿರುವ  ಮರು ಸ್ಥಬ್ಧಚಿತ್ರ ಮತ್ತು ಕಲಾ ತಂಡಗಳ ಮೆರವಣಿಗೆಗಳು  ಮರು ಪ್ರದರ್ಶನವಾಗಬಾರದು ಎಂದರು.

ದಸರಾದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮದ ಬಗ್ಗೆ ಎಚ್ಚರಿಕೆ ವಹಿಸಿ, ದಸರಾ ವೀಕ್ಷಿಸಲು ಬಂದಂತಹ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಯಾವುದೇ ರೀತಿಯ ನಿರಾಸೆಯಾಗದಂತೆ ಅದ್ದೂರಿಯಾಗಿ ಎಲ್ಲಾ ಕಾರ್ಯಕ್ರಮಗಳು ಜರುಗುವಂತೆ  ನೋಡಿಕೊಳ್ಳಬೇಕು. ಉಪಸಮಿತಿಯಲ್ಲಿನ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸಿ ದಸರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ  ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ ಪುಷ್ಪ ಅಮರನಾಥ್, ಸಂಸದ ಸುನಿಲ್ ಬೋಸ್ , ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ  ಕೆ ಎಂ.ಗಾಯತ್ರಿ, ಅಪರಜಿಲ್ಲಾಧಿಕಾರಿ ಪಿ ಶಿವರಾಜು, ಜಿಲ್ಲಾ ಪೊಲೀಸ್ ಆಯುಕ್ತೆ ಸಿಮಾ ಲಾಟ್ಕರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ದಸರಾ 19 ಉಪ ಸಮಿತಿಯ ಕಾರ್ಯದರ್ಶಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

key words: District incharge Minister, Dr.H.C.Mahadevappa, released the, poster of, "Mysuru Dasara-2024".

Tags :
District incharge MinisterDr.H.C.MahadevappaMysuru Dasara-2024poster ofreleased the
Next Article