HomeBreaking NewsLatest NewsPoliticsSportsCrimeCinema

ಬಹಿರಂಗ ಚರ್ಚೆಗೆ ಸಿದ್ಧ: ಡಿ.ಕೆ ಶಿವಕುಮಾರ್ ಸವಾಲು ಸ್ವೀಕರಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

12:02 PM Oct 26, 2023 IST | prashanth

ಬೆಂಗಳೂರು,ಅಕ್ಟೋಬರ್,26,2023(www.justkannada.in): ರಾಮನಗರ ಜಿಲ್ಲೆ ವಿಚಾರವಾಗಿ ಬಹಿರಂಗ ಚರ್ಚೆಗೆ ಬರುವಂತೆ ಡಿಸಿಎಂ ಡಿಕೆ ಶಿವಕುಮಾರ್ ಹಾಕಿದ್ದ ಸವಾಲನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ವೀಕರಿಸಿದ್ದಾರೆ.

ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರಾಮನಗರ ಜಿಲ್ಲೆ  ವಿಚಾರವಾಗಿ ಬಹಿರಂಗ ಚರ್ಚೆಗೆ ಬರುವ ಸವಾಲು ಹಾಕಿದ್ದಾರೆ. ಟಿಆರ್ ಪಿ ಇರುವ ಚಾನಲ್ ನಲ್ಲಿ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ. ನಾನು ಪಲಾಯಾನ ಮಾಡೋದಿಲ್ಲ. ಸವಾಲು ಸ್ವೀಕರಿಸುತ್ತೇನೆ ಎಂದಿದ್ದಾರೆ.

ಪದೇ ಪದೇ ಮೈತ್ರಿ ಸರ್ಕಾರ ಪತನದ ಬಗ್ಗೆ ಮಾತನಾಡುತ್ತಿದ್ದಾರೆ. ಯಾವುದೇ ಷರತ್ತು ಹಾಕಿರಲಿಲ್ಲ ಎಂದು ಹೇಳಿದ್ದಾರೆ. ಮೊದಲ ದಿನದಿಂದಲೂ ಷರತ್ತು ಮೇಲೆ ಷರತ್ತು ಹಾಕಿದ್ರು ಎಂದು ಕಿಡಿಕಾರಿದರು.

ಸಿದ್ದರಾಮಯ್ಯಗೆ ನಾನು ರಾಜಕೀಯ ವಿಲನ್. ಸಿದ್ಧರಾಮಯ್ಯಗೆ ಸ್ನೇಹಿತ ಆಗಬೇಕಿತ್ತಾ. ಇವರು ಮಾಡುವ ತಪ್ಪಿಗೆ ನಾನು ವಿಲನ್ ಎಂದು ಸಿಎಂ ಸಿದ್ಧರಾಮಯ್ಯಗೆ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು.

ಮೇಗಾಡೈರಿಗೆ ಭೂಮಿ ಕೊಟ್ಟ ರೈತರಿಗೆ ನೀವು ಏನು ಮಾಡಿದ್ರಿ. ರೈತರಿಗೆ ನೀಡಿದ್ದ ಭೂಮಿ ನಿಮ್ಮ ಪಟಾಲಂ ಲೂಟಿ ಮಾಡಿದ್ರು.  ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಮಿಸ್ಟರ್ ಡಿಕೆ ಶಿವಕುಮಾರ್ ಎಂದು ಹೆಚ್.ಡಿಕೆ ಗುಡುಗಿದರು.

Key words: Ready –open- debate-Former CM- HD Kumaraswamy –accepts- DK Shivakumar

Tags :
Ready –open- debate-Former CM- HD Kumaraswamy –accepts- DK Shivakumar
Next Article