For the best experience, open
https://m.justkannada.in
on your mobile browser.

ಮೊದಲನೇ ಹಂತದ ಹೋರಾಟದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ರಿಲೀಫ್: ಸಿಬಿಐ ತನಿಖೆ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಾಪಾಸ್

12:33 PM Nov 29, 2023 IST | prashanth
ಮೊದಲನೇ ಹಂತದ ಹೋರಾಟದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ರಿಲೀಫ್  ಸಿಬಿಐ ತನಿಖೆ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಾಪಾಸ್

ಬೆಂಗಳೂರು,ನವೆಂಬರ್,29,2023(www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದಅನುಮತಿಯನ್ನ ಸರ್ಕಾರ  ವಾಪಸ್ ಪಡೆದಿತ್ತು. ಈ ಹಿನ್ನಲೆಯಲ್ಲಿ ಸರ್ಕಾರ ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಅವರ ಪರ ವಕೀಲರು ಹಿಂಪಡೆದಿದ್ದಾರೆ.

ಈ ಮೂಲಕ ಮೊದಲನೇ ಹಂತದ ಹೋರಾಟದಲ್ಲಿ ಡಿಕೆ ಶಿವಕುಮಾರ್ ರಿಗೆ ರಿಲೀಫ್ ಸಿಕ್ಕಂತಾಗಿದೆ.  ಡಿ.ಕೆ ಶಿವಕುಮಾರ್ ಅವರು ಸಿಬಿಐ ತನಿಖೆಗೆ ಸರ್ಕಾರ ವಹಿಸಿದ್ದ ಅರ್ಜಿಯ ಮೇಲ್ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್ ನ್ಯಾಯಪೀಠದ ಮುಂದೆ ರಾಜ್ಯ ಸರ್ಕಾರದ ಪರ ಎಜೆ ಶಶಿಕಿರಣ್ ಶೆಟ್ಟಿ ಅವರು, ರಾಜ್ಯ ಸಂಪುಟದ ನಿರ್ಧಾರವನ್ನು ಲಿಖಿತ ಪತ್ರದಲ್ಲಿ ಇಟ್ಟಿದ್ದಾರೆ.

ಸಿಬಿಐ ಪರ ವಕೀಲರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪರ ವಕೀಲರು ವಾದ-ಪ್ರತಿವಾದವನ್ನು ಮಾಡಿದರು.  ಈಗಾಗಲೇ ಸಿಬಿಐ ತನಿಖೆ ಮುಕ್ತಾಯ ಹಂತಕ್ಕೆ ಬಂದಿದೆ . ಹೀಗಾಗಿ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದ ಕ್ಯಾಬಿನೆಟ್  ನಿರ್ಧಾರ ಕಾನೂನು ಬಾಹಿರ ಎಂದು ಸಿಬಿಐ ಪರ ವಕೀಲರು ವಾದಿಸಿದರು. ವಿಚಾರಣೆ ಕೆಲಕಾಲ ಮುಂದೂಡಿಕೆಯಾಗಿದ್ದು ಇದೀಗ ಮತ್ತೆ ಶುರುವಾಗಿದೆ.

Key words: Relief - DCM -DK Shivakumar -Appeal -petition – CBI- investigation –highcourt

Tags :

.