ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ.
10:43 AM Oct 27, 2023 IST
|
prashanth
Tags :
ಚಿಕ್ಕಮಗಳೂರು,ಅಕ್ಟೋಬರ್,27,2023(www.justkannada.in): ಮೂರು ದಿನಗಳಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ನವೆಂಬರ್ 4ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Tourists - restricted – Mullayanagiri-Dattapeeth area - three days.
Next Article